ಮಾನವ ಜನ್ಮ ದೊಡ್ಡದು,
ಇದ ಪಂತುವರಾಳಿ ಅಟ್ಟ
ಮಾನವ ಜನ್ಮ ದೊಡ್ಡದು, ಇದ
ಹಾನಿ ಮಾಡಲಿಬೇಡಿ ಹುಚ್ಚಪ್ಪಗಳಿರಾ ಪ
ಕಣ್ಣು ಕೈ ಕಾಲ್ ಕಿವಿ ನಾಲಿಗೆ ಇರಲಿಕ್ಕೆ
ಮಣ್ಣು ಮುಕ್ಕಿ ಮರುಳಾಗುವರೆ
ಹೆಣ್ಣು ಮಣ್ಣಿಗಾಗಿ ಹರಿಯ ನಾಮಾಮೃತ
ಉಣ್ನದೆ ಉಪವಾಸ ಇರುವರೆ ಖೋಡಿ ೧
ಕಾಲನ ದೂತರು ಕಾಲ್ಪಿಡಿದೆಳೆವಾಗ
ತಾಳು ತಾಳೆಂದರೆ ತಾಳುವರೆ
ಧಾಳಿ ಬಾರದ ಮುನ್ನ ಧರ್ಮವ ಗಳಿಸಿರೊ
ಸುಳ್ಳಿನ ಸಂಸಾರ ಸುಳಿಗೆ ಸಿಕ್ಕಲುಬೇಡಿ ೨
ಏನು ಕಾರಣ ಯದುಪತಿಯನು ಮರೆತಿರಿ
ಧನ ಧಾನ್ಯ ಸತಿಸುತರು ಕಾಯುವರೆ
ಇನ್ನಾದರೂ ಏಕೋಭಾವದಿ ಭಜಿಸಿರೋ
ಚೆನ್ನ ಶ್ರೀ ಪುರಂದರವಿಠ್ಠಲರಾಯನ ೩
*****
