ತಟಕ್ಕನೆ ಯಾವುದೇ ಕೃತಿಯನ್ನಾಗಲಿ, ಬರವಣಿಗೆಯನ್ನಾಗಲಿ ಒಪ್ಪಿಕೊಳ್ಳದ ಮೊಂಡಾಟದ ಹಠವಾದಿ ಓದುಗ ನನ್ನಲ್ಲಿ ಸದಾ ಜಾಗರೂಕನಾಗಿರುತ್ತಾನೆ. ಸುತ್ತಮುತ್ತಲಿನವರಿಗೆಲ್ಲ ಒಮ್ಮೊಮ್ಮೆ ಕಿರಿಕಿರಿಯೆನ್ನಿಸಬಹುದಾದಷ್ಟು – ಕೃತಿಯೊಂದಿಗೆ, ಪಾತ್ರಗಳೊಂದಿಗೆ, ವಿವರಗಳೊಂದಿಗೆ ಹೊಡೆದಾಡುತ್ತಲೇ, ಜಗಳ ಮಾಡುತ್ತಲೇ ಸಾಗುತ್ತ ಹೋಗುವ ಅವನ ಎಲ್ಲ ಅಭಿಪ್ರಾಯಗಳನ್ನು ಬದಿಗೊತ್ತಿ ವಿವೇಕ್ ಶಾನಭಾಗರ ‘ಇನ್ನೂ ಒಂದು’ ಕಾದಂಬರಿಯನ್ನು ಈ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ. ಕೃತಿಯ ಲೋಪಗಳನ್ನು ತೋರಿಸುವ ವಿಮರ್ಶಕ ಪ್ರವೃತ್ತಿ ನನ್ನದಲ್ಲ, ಓದುಗನಾಗಿ ಈ ಕಾದಂಬರಿ ಎತ್ತಿರುವ ಅನೇಕ ಮಹತ್ವದ ಪ್ರಶ್ನೆಗಳನ್ನು ಗುರುತಿಸುವ ಮೂಲಕ ಈ ಕೃತಿ ಒಡ್ದುವ ಸಂವಾದಕ್ಕೆ ಕನ್ನಡಸಾಹಿತ್ಯ.ಕಾಂ ತೆರೆದುಕೊಳ್ಳಲಿ ಎಂಬ ಸದುದ್ದೇಶವನ್ನು ಎಲ್ಲರೂ ಅರ್ಥ ಮಾಡಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ. ಅನಂತಮೂರ್ತಿಯವರ ‘ದಿವ್ಯ’ ದಂತೆಯೆ ಈ ಕಾದಂಬರಿಯನ್ನೂ ಸಂಕ್ಷಿಪ್ತಗೊಳಿಸಲಾಗಿದೆ. ಮಾರುಕಟ್ಟೆಯಲ್ಲಿರುವ ಕೃತಿಯ ಇಡೀ ಪಠ್ಯವನ್ನು ನೀಡಿ ಮಾರಾಟಕ್ಕೆ ಧಕ್ಕೆ ತರಬಾರದೆಂಬದು ಎಂಬ ನಂಬಿಕೆಯನ್ನು ಪ್ರತಿಪಾದಿಸುತ್ತ ನೂರ ಹನ್ನೊಂದು ಪುಟದ ಈ ಕೃತಿಯನ್ನು ಪ್ರಕಟಣೆ: ಅಕ್ಷರ ಪ್ರಕಾಶನ, (ಸಾಗರ) ,ಕರ್ನಾಟಕ. ಬೆಲೆ ರೂ: ೫೦.೦೦. ಅನೇಕ ಮಹತ್ವದ ಪ್ರಶ್ನೆಗಳನ್ನು ಎತ್ತಿ ತಳಮಳಕ್ಕೀಡುಮಾಡಿಬಿಡುವ ಈ ಕೃತಿಯನ್ನು ಓದಿ ಪ್ರತಿಕ್ರಿಯಿಸಿದರೆ, ಉತ್ತಮ ಚರ್ಚೆಯೊಂದಕ್ಕೆ ದಾರಿಯಾಗುತ್ತದೆ ಎಂಬ ವಿಶ್ವಾಸವಿದೆ.
Related Posts
ಅಂತರ್ಜಾಲದಲ್ಲಿ ಕನ್ನಡಕ್ಕಿರುವ ಸಂಕಟ
- ಶೇಖರ್ ಪೂರ್ಣ
- ಮಾರ್ಚ್ 29, 2001
- 0
ಜಗತ್ತಿನ ನಕಾಶೆಯಲ್ಲಿ ಬೆಂಗಳೂರು ಇಂದು ಮಾಹಿತಿ ತಂತ್ರಜ್ಞಾನದ ಗಮನ ಸೆಳೆಯುತ್ತಿದೆ. ಕನ್ನಡಿಗರೇ ಆದ ನಾರಾಯಣಮೂರ್ತಿಗಳಿದ್ದಾರೆ, ಜಗದೀಶ್ ಇದ್ದಾರೆ, ಗುರುರಾಜ್ರವರಿದ್ದಾರೆ – ಬಹುಶಃ ಈ ಹೆಸರಿನ ಪಟ್ಟಿಗೆ ಇನ್ನೂ ಅನೇಕ ಗಣ್ಯರನ್ನು ಹುಡುಕುವುದು ಸುಲಭವಾದೀತು. ಆದರೆ […]
ಆಘಾತಗಳ ನಡುವೆ ಹಾಗು ಆಚೆಗಿನದು..
- ಶೇಖರ್ ಪೂರ್ಣ
- ಜೂನ್ 8, 2008
- 0
ಆದದ್ದು ಎರಡು ಆಘಾತಗಳು. ಎರಡೂ ನನ್ನ ಮಟ್ಟಿಗೆ ಪ್ರಾಣಾಂತಿಕವೆ. ಒಂದು ನನಗಾದ ಹೃದಯಾಘಾತ. ನಾನು ಶ್ರೀಮಂತನೇನೂ ಅಲ್ಲ. ಮೊದಲನೆ ತಾರೀಖು ಬರುವ ಸಂಬಳವನ್ನು ನೆಚ್ಚಿಕೊಂಡು ತುಟಿಕಚ್ಚಿಕೊಂಡು ಬದುಕುವುದನ್ನು ಕಲಿತವನು. ಪ್ರಾಣ ಹೋಗಿದ್ದರೆ ಚೆನ್ನಿತ್ತೇನೋ ಎಂದನ್ನಿಸಿಬಿಡದಂತೆ […]
ಮುಂದುವರೆದ ಚರ್ಚೆ-ವಾದ-ಪ್ರತಿಕ್ರಿಯೆಗಳು
- ಶೇಖರ್ ಪೂರ್ಣ
- ಏಪ್ರಿಲ್ 2, 2006
- 0
ಸಂಪಾದಕೀಯ: ೦೧-೦೪-೨೦೦೬ ೧೨-೦೪-೨೦೦೬ ರಂದು ಸೇರಿಸಿದ್ದು: ಬಹಳ ಹಿಂದೆ. ಪತ್ರಕರ್ತನಾದರೆ ಸಿನಿಮಾ ಮಂದಿಯ ಸಾಮಿಪ್ಯ, ಅವರೊಡನೆ ಹರಟೆ, ಮುನಿಸು ಇತ್ಯಾದಿಯೆಲ್ಲ ಮಾಮೂಲೆ. ಹಂಸಲೇಖರವರೊಡನೆ ಮಾತನಾಡಿ, ಚಾಮುಂಡೇಶ್ವರಿ ಸ್ಟುಡಿಯೋದಲ್ಲಿನ ಸೌಂಡ್ ರೆಕಾರ್ಡಿಂಗ್ ಸ್ಟುಡಿಯೋದ ಮೆಟ್ಟಿಲುಗಳನ್ನು ಇಳಿದು […]
