ವಕ್ರ Posted on ಮೇ 23, 2025ಮೇ 25, 2025 by ನಿಸಾರ್ ಅಹಮದ್ ಕೆ ಎಸ್ ಎಲ್ಲರಂತಲ್ಲ ಈ ನಮ್ಮ ದುರ್ಬುದ್ದಿ ಜೀವಿ ಇವನ ರೀತಿ ವೈಶಿಷ್ಟ್ಯಮಯ: ಬಯಸುತ್ತಾನೆ ಈಜಲು ನೀರಿಲ್ಲದ ಬಾವಿ, ಸಂಜೆ ಆಗುಂಬೆಯಲಿ ಸೂರ್ಯೋದಯ. *****
ಹನಿಗವನ ಘೋಷಣೆ ನಿಸಾರ್ ಅಹಮದ್ ಕೆ ಎಸ್ ಏಪ್ರಿಲ್ 17, 2023 0 “ಅಲ್ಪಸಂಖ್ಯರ ಹಿತ ರಕ್ಷಣೆಯೆ ನಮ್ಮಯ ಪಕ್ಷದ ಧ್ಯೇಯ, ಆಗಲು ಬಿಡೆವು ನಾವೆಂದೆಂದಿಗು ಅವರಿಗೆ ಅನ್ಯಾಯ” -ಗೋಡೆಯ ಬರಹವ ಓದಿದ ಒಡನೆ ಮೂಡದೆ ಇರುವುದೆ ಪುಲಕ! ನೆನಪಿಸಿ ಆ ಸಾ-ಮಿಲ್ಲಿನ ಮೇಲಿನ ‘ಮರ ಬೆಳಸಿ ಫಲಕ’. […]
ಹನಿಗವನ ಅಡ್ಡ ವೈಸು ನಿಸಾರ್ ಅಹಮದ್ ಕೆ ಎಸ್ ಅಕ್ಟೋಬರ್ 17, 2025 0 “ಗೀತಾ, ಮನೆ ಮುಗೀತಾ? ಯಾವಾಗ ಗೃಹಪ್ರವೇಶ?” “ಮುಗೀತೂರಿ, ಆದ್ರೆ ಕಂಟ್ರಾಕ್ಟರ್ ಮಾಡ್ದ ಸಖತ್ ಮೋಸ”. “ಯಾಕೆ? ಏನಾಯ್ತು ಅಂಥದ್ದು? ಪೀಕಿಸಿದ್ನ ದುಡ್ಡು ಜಾಸ್ತಿ?” “ಅವನ ಮನೆ ಹಾಳಾಗ, ಕರಗಿಸಿಬಿಟ್ಟ ಕಣ್ರಿ ಇದ್ದ ಬದ್ದ ಆಸ್ತಿ”. […]